Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:9 - ಕನ್ನಡ ಸತ್ಯವೇದವು J.V. (BSI)

9 ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:9
16 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಆಲೂಷಿನಿಂದ ಹೊರಟು ರೆಫೀದೀವಿುನಲ್ಲಿ ಇಳಿದುಕೊಂಡರು; ಅಲ್ಲಿ ಜನರು ಕುಡಿಯುವದಕ್ಕೆ ನೀರು ಸಿಕ್ಕಲಿಲ್ಲ.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?


ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಆರೋನರಿಗೆ ವಿರೋಧವಾಗಿ ಕೂಡಿಕೊಂಡು ಮೋಶೆಯ ಸಂಗಡ ವಿವಾದಿಸುವವರಾಗಿ -


ತರುವಾಯ ಇಸ್ರಾಯೇಲ್ಯರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಪ್ರಕಾರ ಸೀನ್ ಎಂಬ ಅರಣ್ಯದಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀವಿುನಲ್ಲಿ ಇಳುಕೊಂಡರು.


ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರುಷ ಆಳಿದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು


ಯಾವ ಮಾರ್ಗವಾಗಿ ಹೋಗಬೇಕೆಂದು ವಿಚಾರಿಸಿದಾಗ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಅಂದನು.


ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.


ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇವಿುಸಿಕೊಂಡರು.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು