Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:13 - ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಷನು ಗೇಹಜಿಯ ಮುಖಾಂತರವಾಗಿ ಆಕೆಯನ್ನು - ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದಿ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರವಾಗಿ ಅರಸನ ಮುಂದಾಗಲಿ ಸೇನಾಪತಿಯ ಮುಂದಾಗಲಿ ಮಾತಾಡಬೇಕೋ ಎಂದು ಕೇಳಲು ಆಕೆಯು - ನಾನು ಸ್ವಕುಲದವರ ಮಧ್ಯದಲ್ಲಿ ಸುಖವಾಗಿದ್ದೇನೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:13
22 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ನೀವು ಆಕೆಯನ್ನು ಕರ್ತನ ಶಿಷ್ಯಳೆಂದು ದೇವಜನರಿಗೆ ತಕ್ಕ ಹಾಗೆ ಸೇರಿಸಿಕೊಂಡು ಸಹಾಯವು ಯಾವ ವಿಷಯದಲ್ಲಿ ಬೇಕಾಗಿದ್ದರೂ ಸಹಾಯವನ್ನು ಮಾಡಿರಿ. ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವದನ್ನು ಕಂಡು ಅವರನ್ನು ಸಮೀಪಿಸಿ - ಸೇನಾಪತಿಯೇ, ನಿನಗೊಂದು ಮಾತು ಹೇಳುವದದೆ ಅಂದನು. ಯೇಹುವು ಅವನನ್ನು - ನಮ್ಮಲ್ಲಿ ಯಾರಿಗೆ ಎಂದು ಕೇಳಲು ಅವನು - ಸೇನಾಪತಿಯಾದ ನಿನಗೇ ಎಂದು ಉತ್ತರಕೊಟ್ಟನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ - ಯೆಹೋವನು ಈ ದೇಶಕ್ಕೆ ಏಳು ವರುಷಗಳ ಬರವನ್ನು ಕಳುಹಿಸುವದಕ್ಕಿರುತ್ತಾನೆ. ಆದದರಿಂದ ನೀನು ನಿನ್ನ ಮನೆಯವರೊಡನೆ ಯಾವದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು ಎಂದು ಹೇಳಿದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು.


ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆಯು ಬಂದು ಮುಂದೆ ನಿಂತಳು.


ಆಮೇಲೆ ಎಲೀಷನು ಗೇಹಜಿಯನ್ನು - ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು ಎಂದು ಕೇಳಲು ಅವನು - ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು