Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:23 - ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:23
9 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.


ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಬಾಗಲು ಮುಚ್ಚಿ ಗಂಡನನ್ನು ಕರಿಸಿ ಅವನಿಗೆ - ದಯವಿಟ್ಟು ನನಗೋಸ್ಕರ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು; ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿ ಬರುತ್ತೇನೆ ಎಂದು ಹೇಳಿದಳು.


ಆಕೆಯು ಚಿಂತೆಯಿಲ್ಲ ಎಂದು ಹೇಳಿ ಕತ್ತೆಗೆ ತಡಿಹಾಕಿಸಿ ಕೂತುಕೊಂಡು ಸೇವಕನಿಗೆ - ಹೊಡೆ, ಓಡಿಸುತ್ತಾ ಬಾ; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ ಎಂದು ಆಜ್ಞಾಪಿಸಿದಳು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.


ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು