Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:27 - ಕನ್ನಡ ಸತ್ಯವೇದವು J.V. (BSI)

27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:27
19 ತಿಳಿವುಗಳ ಹೋಲಿಕೆ  

ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.


ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ?


ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.


ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ -


ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಒಬ್ಬ ಹೆಂಗಸಿನ ಸಂಗಡ ಮಾತಾಡುತ್ತಿರುವದನ್ನು ಕಂಡು ಆಶ್ಚರ್ಯಪಟ್ಟರು. ಆದರೂ - ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತಾಡುತ್ತೀ? ಎಂದು ಒಬ್ಬರೂ ಕೇಳಲಿಲ್ಲ.


ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಆದರೆ ಯೇಸು - ಈಕೆಯನ್ನು ಬಿಡಿರಿ. ಈಕೆಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.


ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು.


ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.


ಅಗೋ, ಅಲ್ಲಿ ಶೂನೇಮ್ಯಳು! ನೀನು ಓಡಿಹೋಗಿ ಆಕೆಯನ್ನು ಎದುರುಗೊಂಡು - ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೋ ಎಂದು ವಿಚಾರಿಸು ಎಂಬದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ - ಕ್ಷೇಮ ಎಂದು ಉತ್ತರಕೊಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು