Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:41 - ಕನ್ನಡ ಸತ್ಯವೇದವು J.V. (BSI)

41 ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:41
7 ತಿಳಿವುಗಳ ಹೋಲಿಕೆ  

ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -


ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.


ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ.


ಇದನ್ನು ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರುಮಾಡಿ ಆ ಕೆಸರನ್ನು ಅವನ ಕಣ್ಣುಗಳಿಗೆ ಹಚ್ಚಿ -


ದೇವರ ಮನುಷ್ಯನು ಅವನನ್ನು - ಅದು ಎಲ್ಲಿ ಬಿದ್ದಿತು ಎಂದು ಕೇಳಲು ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಕೊಡಲಿಯು ತೇಲಾಡಿತು.


ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು