Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:42 - ಕನ್ನಡ ಸತ್ಯವೇದವು J.V. (BSI)

42 ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:42
22 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು - ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು ಎನ್ನಲು ಆಳು -


ಅವರು ಕೂಡಿಸಲಾಗಿ ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ವಿುಕ್ಕತುಂಡುಗಳಿಂದ ಹನ್ನೆರಡು ಪುಟ್ಟಿ ತುಂಬಿದವು.


ಇಲ್ಲಿರುವ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಮೀನುಗಳೂ ಅವೆ; ಆದರೆ ಇಷ್ಟು ಜನರಿಗೆ ಅವು ಯಾತಕ್ಕಾದಾವು?


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾದೇಶ ಇವುಗಳಲ್ಲಿ ಸಂಚರಿಸಿದರೂ ಅವು ಸಿಕ್ಕಲಿಲ್ಲ; ಶಾಲೀಮ್, ಬೆನ್ಯಾಮೀನ್ ಈ ಪ್ರಾಂತಗಳಲ್ಲಿಯೂ ಸಿಕ್ಕಲಿಲ್ಲ.


ನಾವು ನಿಮಗೋಸ್ಕರ ಆತ್ಮಸಂಬಂಧವಾದ ಬೀಜವನ್ನು ಬಿತ್ತಿದ ಮೇಲೆ ನಿವ್ಮಿುಂದ ಶರೀರಸಂಬಂಧವಾದ ಪೈರನ್ನು ಕೊಯ್ಯುವದು ದೊಡ್ಡದೋ?


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ನೀನು ಹತ್ತು ರೊಟ್ಟಿಗಳನ್ನೂ ವಿುಠಾಯಿಯನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವದೆಂದು ಅವನು ತಿಳಿಸುವನು ಎಂದು ಹೇಳಿದನು.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು; ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು