Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:18 - ಕನ್ನಡ ಸತ್ಯವೇದವು J.V. (BSI)

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷವಿುಸಲಿ; ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:18
9 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು.


ಅರಸನು ತನ್ನ ಹಸ್ತಕನಾದ ಸರದಾರನನ್ನು ಊರು ಬಾಗಲು ಕಾಯುವದಕ್ಕಾಗಿ ಕಳುಹಿಸಿದಲ್ಲಿ ಅವನು ಜನರಿಂದ ತುಳಿಯಲ್ಪಟ್ಟು ಸತ್ತನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಆರ್‍ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ.


ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು