Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:1 - ಕನ್ನಡ ಸತ್ಯವೇದವು J.V. (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:1
15 ತಿಳಿವುಗಳ ಹೋಲಿಕೆ  

ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ದಾನ್‍ಕುಲದವರು ತಮ್ಮ ಪ್ರಾಂತವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆವಿುನವರೊಡನೆ ಯುದ್ಧಮಾಡಿ ಜಯಿಸಿ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಮತ್ತು ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಆದರೆ ಯೋಸೇಫ್ಯರು ಯೆಹೋಶುವನಿಗೆ - ನೀನು ಚೀಟುಹಾಕಿ ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿದ್ದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ ಎಂದು ಹೇಳಲು


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು