Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:18 - ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:18
10 ತಿಳಿವುಗಳ ಹೋಲಿಕೆ  

ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ.


ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು


ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು