Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:19 - ಕನ್ನಡ ಸತ್ಯವೇದವು J.V. (BSI)

19 ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:19
7 ತಿಳಿವುಗಳ ಹೋಲಿಕೆ  

ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ; ಅವರ ಕಣ್ಣು ಕಟ್ಟಿದ ಹಾಗಾಯಿತು.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ದಿನಾಲೂ ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.


ಅವರು ಸಮಾರ್ಯದೊಳಗೆ ಬಂದಾಗ ಎಲೀಷನು - ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ ಎಂದು ಯೆಹೋವನನ್ನು ಬೇಡಿಕೊಂಡದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು