Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:21 - ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಅರಸನು ಅವರನ್ನು ಕಂಡು ಎಲೀಷನಿಗೆ - ಅಪ್ಪಾ, ನಾನು ಇವರನ್ನು ಸಂಹರಿಸಲೋ ಸಂಹರಿಸಲೋ ಎಂದು ಕೇಳಲು ಅವನು - ಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:21
9 ತಿಳಿವುಗಳ ಹೋಲಿಕೆ  

ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.


ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು - ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ ಇಲ್ಲವೋ ಎಂಬದನ್ನು ವಿಚಾರಿಸುವದಕ್ಕಾಗಿ ನನ್ನನ್ನು ನಿನ್ನ ಹತ್ತಿರ ಕಳುಹಿಸಿದ್ದಾನೆ ಎಂದು ಹೇಳಿದನು.


ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ಆತನ ಸುತ್ತಲಿದ್ದವರು ಮುಂದೆ ಆಗುವದನ್ನು ತಿಳಿದು - ಸ್ವಾಮೀ, ನಾವು ಕತ್ತಿಯಿಂದ ಹೊಡೆಯೋಣೋ ಎಂದು ಕೇಳಿದರು.


ಎಲೀಷನು ಮರಣಕರ ರೋಗದಲ್ಲಿ ಬಿದ್ದನು. ಇಸ್ರಾಯೇಲ್ಯರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಬಲಗಳಾಗಿದ್ದವನೇ ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ.


ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು