Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:24 - ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇದಾದನಂತರ, ಅರಾಮ್ಯರ ರಾಜನಾದ ಬೆನ್ಹದದನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿಕೊಂಡು, ಸಮಾರ್ಯವನ್ನು ಸುತ್ತುವರಿದು ಆಕ್ರಮಣಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:24
12 ತಿಳಿವುಗಳ ಹೋಲಿಕೆ  

ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.


ಇದಲ್ಲದೆ ಅವನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.


ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ


ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಏಳನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು


ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು


ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ಅರಾಮ್ಯರ ಅರಸನು ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತು ಮಾಡುವಷ್ಟು ಸಾರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು