Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:33 - ಕನ್ನಡ ಸತ್ಯವೇದವು J.V. (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:33
32 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಆದದರಿಂದ ಸೌಲನು ಬಹುಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.


ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.


ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಮನುಷ್ಯನಿಗೆ ಜೀವವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವದೇಕೆ?


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು