Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:5 - ಕನ್ನಡ ಸತ್ಯವೇದವು J.V. (BSI)

5 ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:5
12 ತಿಳಿವುಗಳ ಹೋಲಿಕೆ  

ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.


ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.


ಅಯ್ಯೋ, ಅಯ್ಯೋ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾ ಪಟ್ಟಣಕ್ಕೆ ಏನು ದುರ್ಗತಿ ಸಂಭವಿಸಿತು.


ಕೂಡಲೆ ಎಣ್ಣೆಯುಕ್ಕುವದು ನಿಂತು ಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.


ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.


ಎತ್ತರ ಮರಗಳು ನೆಲದ ಪಾಲಾಗುವವು; ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಮುಟ್ಟಿನಿಂದ ಕಡಿದುಬಿಡುವನು; ಲೆಬನೋನಿನ ವನವು ಆ ಬಲಿಷ್ಠನಿಂದ ಬಿದ್ದುಹೋಗುವದು.


ಅವರು ಯೊರ್ದನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ


ದೇವರ ಮನುಷ್ಯನು ಅವನನ್ನು - ಅದು ಎಲ್ಲಿ ಬಿದ್ದಿತು ಎಂದು ಕೇಳಲು ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಕೊಡಲಿಯು ತೇಲಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು