Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:15 - ಕನ್ನಡ ಸತ್ಯವೇದವು J.V. (BSI)

15 ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:15
14 ತಿಳಿವುಗಳ ಹೋಲಿಕೆ  

ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.


ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ಯೆಹೋವನ ಆ ಮಾತಿಗೆ ಸೈತಾನನು - ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಪಾನಪಾತ್ರೆಗಳು ಬಂಗಾರದವುಗಳೂ ನಾನಾ ಆಕಾರದವುಗಳೂ ಆಗಿದ್ದವು. ರಾಜದ್ರಾಕ್ಷಾರಸವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.


ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ ಅರಾಮ್ಯರ ಸೈನ್ಯವೆಲ್ಲಿರುತ್ತದೆಂಬದನ್ನು ನೋಡಿ ಬರುವದಕ್ಕಾಗಿ ರಾಹುತರನ್ನು ಕಳುಹಿಸಿದನು.


ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.


ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು