Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:15 - ಕನ್ನಡ ಸತ್ಯವೇದವು J.V. (BSI)

15 ಮರುದಿನ ಬೆಳಿಗ್ಗೆ ಇವನು ಕವುದಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:15
19 ತಿಳಿವುಗಳ ಹೋಲಿಕೆ  

ಹಜಾಯೇಲನು ಎಲೀಷನನ್ನು - ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವದು ಹೇಗೆ ಎಂದು ಕೇಳಲು ಅವನು - ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ ಅಂದನು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.


ಆಗ ಯೆಹೋವನು ಅವನಿಗೆ - ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು;


ಪಟ್ಟಣವು ಅವರ ವಶವಾದದ್ದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಜಿಮ್ರಿಯು ಅಲ್ಲಿಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ನಡೆಯಿತು.


ಬಾಷನು ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು;


ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ - ಹೇಗೂ ನಿನಗೆ ವಾಸಿಯಾಗುವದು ಎಂಬದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿ


ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು