Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:7 - ಕನ್ನಡ ಸತ್ಯವೇದವು J.V. (BSI)

7 ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:7
18 ತಿಳಿವುಗಳ ಹೋಲಿಕೆ  

ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.


ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,


ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ.


ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಬೆನ್ಹದದನು ಅವನಿಗೆ - ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರ್ಯದಲ್ಲಿ ಮಾಡಿದಂತೆ ನೀನೂ ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಲು ಅಹಾಬನು - ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿ ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಹೋಗಿ ಈಕೆಯ ಹೊಲಮನೆಗಳನ್ನೂ ಈಕೆಯು ದೇಶವನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.


ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು