Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:18 - ಕನ್ನಡ ಸತ್ಯವೇದವು J.V. (BSI)

18 ರಾಹುತನು ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದು ಹೇಳಿದನು. ಕಾವಲುಗಾರನು ಅರಸನಿಗೆ - ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರಿಗಿ ಬರುವದು ಕಾಣಿಸುವದಿಲ್ಲ ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾಮನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:18
8 ತಿಳಿವುಗಳ ಹೋಲಿಕೆ  

ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.


ಇವನು ಹೋಗಿ ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದನು.


ಸಮಾಧಾನದ ಮಾರ್ಗವನ್ನೇ ಅರಿಯರು.


ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು - ಜನರ ಒಂದು ಗುಂಪು ಕಾಣಿಸುತ್ತದೆ ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ - ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಎಂದು ಕೇಳುವದಕ್ಕಾಗಿ ಕಳುಹಿಸು ಎಂಬದಾಗಿ ಆಜ್ಞಾಪಿಸಿದನು.


ಅನಂತರ ಅರಮನೆಯ ಪ್ರಾಕಾರದೊಳಗೆ ಬಂದ ಯೇಹುವನ್ನು ಕಂಡು ಅವನನ್ನು - ಯಜಮಾನನನ್ನು ಕೊಂದ ಜಿವ್ರಿುಗೆ ಸಮಾನನೇ, ಕ್ಷೇಮವೋ ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು