Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:24 - ಕನ್ನಡ ಸತ್ಯವೇದವು J.V. (BSI)

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:24
12 ತಿಳಿವುಗಳ ಹೋಲಿಕೆ  

ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಅವರು ಬಹಳವಾಗಿ ಭಯಪಟ್ಟು - ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದುಕೊಂಡರು.


ಮತ್ತೊಬ್ಬನು ಅವನನ್ನು - ನಿನ್ನ ಎದೆಯ ಮೇಲಿನ ಈ ಗಾಯಗಳೇನು ಎಂದು ಕೇಳಿದರೆ ಅವನು - ವಿುತ್ರರ ಮನೆಯಲ್ಲಿ ನನಗಾದ ಗಾಯಗಳು ಎಂದುತ್ತರ ಕೊಡುವನು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.


ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.


ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು