Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:34 - ಕನ್ನಡ ಸತ್ಯವೇದವು J.V. (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:34
10 ತಿಳಿವುಗಳ ಹೋಲಿಕೆ  

ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಅನಂತರ ಅವನು ಅಹಾಬನಿಗೆ - ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ ಅಂದನು.


ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಸೇವಕರು ಶವವನ್ನು ಸಮಾಧಿಮಾಡುವದಕ್ಕಾಗಿ ಹೋದರು; ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು