Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:21 - ಕನ್ನಡ ಸತ್ಯವೇದವು J.V. (BSI)

21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವುಚ್ ತುಮ್ಕಾ ಅನಿ ಅಮ್ಕಾ ಅಭಿಶೆಕ್ ಕರುನ್ ಕ್ರಿಸ್ತಾಚ್ಯಾ ಎಕ್ವಟ್ಟಾನ್ ಘಟ್ ರ್‍ಹಾಯ್ ಸಾರ್ಕೆ ಕರ್ತಾ, ತೆ ದೆವಾನುಚ್ ಅಮ್ಕಾ ಎಗ್ಳುನ್ ಕಾಡಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:21
28 ತಿಳಿವುಗಳ ಹೋಲಿಕೆ  

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -


ಒಡಂಬಡಿಕೆಮಾಡಿಕೊಂಡು ಆಣೆಯಿಟ್ಟು - ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ ಎಂಬದೇ. ಸೆಲಾ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಸಕಲ ಸತ್ಕಾರ್ಯದಲ್ಲಿಯೂ ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.


ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟಿ ಊರನ್ನು ಅನ್ಯಾಯದಿಂದ ಸ್ಥಾಪಿಸುವವನ ಗತಿಯನ್ನು ಏನು ಹೇಳಲಿ!


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು