Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:5 - ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶೆ ಕ್ರಿಸ್ತಾಚ್ಯಾ ಕಸ್ಟಾತ್ನಿ ಅಮಿ ವಾಟೊ ಘೆತಾಂವ್, ತಸೆ ಕ್ರಿಸ್ತಾ ವೈನಾ ಭರ್ಪುರ್ ಮಜತ್‌ಬಿ ಅಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:5
13 ತಿಳಿವುಗಳ ಹೋಲಿಕೆ  

ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳುಕೊಂಡು ಆತನ ಮರಣದ ವಿಷಯದಲ್ಲಿ ಆತನಿಗೆ ಸರೂಪನಾಗಬೇಕೆಂಬದೇ ನನ್ನ ಕುತೂಹಲವಾಗಿದೆ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು