Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:21 - ಕನ್ನಡ ಸತ್ಯವೇದವು J.V. (BSI)

21 ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ತುಮ್ಚ್ಯಾ ಮದ್ದಿ ಯೆಲ್ಲ್ಯಾ ತನ್ನಾ ಮಾಜೊ ದೆವ್ ಮಾಕಾ ಅವ್ಮಾನಾತ್ ಘಾಲಿಲ್ ಕಾಯ್ ಅನಿ ಎಕ್ ಕಾಲಾತ್ ಪಾಪ್ ಕರುನ್ ಹೊತ್ತ್ಯಾ, ಅನಿ ತುಮ್ಚ್ಯೆ ಮದ್ದಿ ಸುಮಾರ್ ಜಾನಾನಿ ಅನಿಬಿ ಬುರ್ಶ್ಯಾ ರಿತಿನ್ ಚಲ್ತಲೆ .ವೆಭಿಚಾರ್ ಅನಿ ಪೊಜ್ಡೆಪಾನ್ ಸೊಡುನ್ ಜಿವನ್ ಬದ್ಲುಕ್ ಪಾವುಕ್ನಾತ್ ಮನುನ್ ರಡ್ತಲೆ ಪಡ್ತಾಕಿ ಕಾಯ್ ಮನುನ್ ಭಿಂಯೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:21
37 ತಿಳಿವುಗಳ ಹೋಲಿಕೆ  

ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಶಿಕ್ಷೆ ಮಾಡುವದಕ್ಕೆ ಸಿದ್ಧರಾಗಿದ್ದೇವೆ.


ಆದಕಾರಣ ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನೂ ನಿಮ್ಮನ್ನು ನಾವು ಹೊಗಳಿದ್ದು ನ್ಯಾಯವೆಂಬದನ್ನೂ ಇವರಿಗೂ ಸಭೆಗಳಿಗೂ ತೋರಿಸಿಕೊಡಿರಿ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಈ ಮಾತನ್ನು ಸುಳ್ಳಾಡದೆ ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ; ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಸಾಕ್ಷಿ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ


ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಹೋಗಿ - ಅಯ್ಯೋ ಅಯ್ಯೋ, ಈ ಜನರು ಮಹಾಪಾಪವನ್ನು ಮಾಡಿದ್ದಾರೆ; ಚಿನ್ನದ ದೇವರನ್ನು ಮಾಡಿಕೊಂಡಿದ್ದಾರೆ. ಆದರೂ ನೀನು ಕರುಣವಿಟ್ಟು ಅವರ ಪಾಪವನ್ನು ಕ್ಷವಿುಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು