Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:7 - ಕನ್ನಡ ಸತ್ಯವೇದವು J.V. (BSI)

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಕಾಯ್ಬಿ ವಾಯ್ಟ್ ಕರಿನಸ್ಲ್ಯಾರ್ ಫಿರೆ ಮನುನ್ ಮಿಯಾ ದೆವಾಕ್ಡೆ ಮಾಗ್ತಾ. ಹೆಚ್ಯಾ ವೈನಾ ಅಮಿ ದಾಕ್ವುನ್ ದಿಲ್ಲಿ ವಾಟ್ ಯೆವ್ಡಿಚ್ ಸಮಾ ಮನುನ್ ದಾಕ್ವುಚೆ ಮನ್ತಲೊ ಮಾಜೊ ಉದ್ದೆಸ್ ನ್ಹಯ್, ಅಮಿ ಅದಿಕಾರಾಕ್ ಯೊಗ್ಯ್ ಮನ್ತಲೊ ತಿರ್ಮಾನ್ ಹೊಲ್ಯಾರ್ ಬಿ ಮೊಟೆ ನ್ಹಯ್, ಖರೆ ಕನ್ನಾಬಿ ಬರೆ ಕರುಚೆ ಮನ್ತಲಿಚ್ ಅಮ್ಚಿ ಗುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:7
25 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವವಾದದ್ದೋ ಅದನ್ನೇ ಯೋಚಿಸಿ ಸಾಧಿಸಿರಿ.


ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನಾವಂತೂ ಅಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವದೆಂಬದಾಗಿ ನಿರೀಕ್ಷಿಸುತ್ತೇನೆ.


ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು; ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು