Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:9 - ಕನ್ನಡ ಸತ್ಯವೇದವು J.V. (BSI)

9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಬಳನಸಲ್ಲೆ ಅನಿ ತುಮಿ ತಾಕ್ತಿಚೆ ರ್‍ಹಾಲ್ಯಾರ್‍ಬಿ ಅಮ್ಕಾ ಕುಶಿಚ್! ತುಮಿ ಸಂಪುರ್ನ್ ಹೊಲ್ಯಾರ್ ಫಿರೆ ಮನ್ತಲಿಚ್ ಮಾಜಿ ಮಾಗ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:9
21 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನ ಸುಖವನ್ನು ನೋಡಿಕೊಳ್ಳಲಿ.


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ ಭಯಪಡುವವನೂ ಬಹು ನಡುಗುವವನೂ ಆಗಿದ್ದೆನು.


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ಹೀಗೆ ನಮ್ಮಲ್ಲಿ ಮರಣವು ಪ್ರವರ್ತಿಸುತ್ತದೆ; ಆದರೆ ನಿಮ್ಮಲ್ಲಿ ಜೀವವು ಪ್ರವರ್ತಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು