Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:12 - ಕನ್ನಡ ಸತ್ಯವೇದವು J.V. (BSI)

12 ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕ್ರಿಸ್ತಾಚಿ ಬರಿ ಖಬರ್ ಪರ್‍ಚಾರ್ ಕರುಕ್ ಮಿಯಾ ತ್ರೊವಾಸಾತ್ ಗೆಲ್ಲ್ಯಾ ತನ್ನಾ, ಥೈ ಕಾಮ್ ಸುರು ಕರುಕ್ ಧನಿಯಾನ್ ಮಾಕಾ ಬರೊ ಅವ್ಕಾಸ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:12
20 ತಿಳಿವುಗಳ ಹೋಲಿಕೆ  

ಆಗ ಅವರು ಮೂಸ್ಯವನ್ನು ಸುಮ್ಮನೆ ದಾಟಿ ತ್ರೋವಕ್ಕೆ ಬಂದರು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.


ನಾವು ತ್ರೋವದಿಂದ ಸಮುದ್ರಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ನೇವಿುಸಿದನು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವದಾದರೆ ನಾಶನಮಾರ್ಗದಲ್ಲಿರುವವರಿಗೇ ಮರೆಯಾಗಿರುವದು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ.


ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.


ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರವಿುಸಿದವರಲ್ಲ.


ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ಏನು, ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತಾರ್ಥವಾಗಿ ಸಾರಿದ್ದು ಪಾಪಕೃತ್ಯವೋ?


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು