Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:17 - ಕನ್ನಡ ಸತ್ಯವೇದವು J.V. (BSI)

17 ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಲೈ ಲೊಕಾ ಕರ್ತಾತ್ ತಶೆ ಅಮಿ ಕಾಯ್ ದೆವಾಚ್ಯಾ ಗೊಸ್ಟಿಚೊ ಯಾಪಾರ್ ಧಂಧೊ ಕರಿನಾವ್. ದೆವಾನುಚ್ ಅಮ್ಕಾ ಎಚುನ್ ನೆಮಲ್ಲೆ ಹಾಯ್ ಅನಿ ತೆಂಚ್ಯಾ ಇದ್ರಾಕ್ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಮಿ ಖರೆ ಅಸಲ್ಲೆಚ್ ಬೊಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:17
30 ತಿಳಿವುಗಳ ಹೋಲಿಕೆ  

ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.


ಸತ್ಯವಾಕ್ಯ ದೇವರ ಮಹತ್ವ ಇವುಗಳಿಂದ ಕೂಡಿದವರಾಗಿದ್ದೇವೆ. ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡವರೂ


ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು