Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:18 - ಕನ್ನಡ ಸತ್ಯವೇದವು J.V. (BSI)

18 ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊಂಡಾರ್ ಕಾಯ್ಬಿ ಧಾಪಿ ನಸ್ತಾನಾ ಧನಿಯಾಚಿ ಮಹಿಮಾ ದಾಕ್ವುನ್ ದಿತಲೆ ಅಮಿ ಹೊತಾಂವ್, ಅಶೆ ಅಮಿ ಧನಿಯಾಚ್ಯಾ ಮಹಿಮೆನ್ ಲೈ ಅನಿ ಲೈ ಹೊಳ್ ಹೊಳ್ತಾಂವ್ ಅನಿ ತೆಚ್ಯಾ ಸರ್ಕೆ ಹೊವ್ನ್ ರುಪ್ ಬದಲ್ತಾವ್. ಹೆ ಸಗ್ಳೆ ಆತ್ಮೊ ಹೊವ್ನ್ ಅಸಲ್ಲ್ಯಾ ಧನಿಯಾಚೆಚ್ ಕಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:18
24 ತಿಳಿವುಗಳ ಹೋಲಿಕೆ  

ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.


ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು;


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ನಾವು ಒಂದಾಗಿರುವ ಪ್ರಕಾರ ಅವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಅವರಿಗೆ ಕೊಟ್ಟಿದ್ದೇನೆ.


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು