Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:6 - ಕನ್ನಡ ಸತ್ಯವೇದವು J.V. (BSI)

6 ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಶೆಚ್ ನಿತಳ್ ಮನಾನಿ, ಶಾನ್ಪಾನಾನ್, ಲೈ ಸಂಬಾಳುನ್ ಅನಿ ದಯಾಳ್ ಸ್ವಭಾವಾನ್ ಅಮಿ ಕ್ರಿಸ್ತಾಚಿ ಸೆವಕಾ ಮನುನ್ ಪವಿತ್ರ್ ಆತ್ಮ್ಯಾ ವೈನಾ ಅಮ್ಚೊ ಖರೊ ಪ್ರೆಮ್ ದಾಕ್ವುನ್ ದಿಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:6
41 ತಿಳಿವುಗಳ ಹೋಲಿಕೆ  

ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ಯಾತರಿಂದಾಯಿತು? ನೀವು ನೇಮನಿಷ್ಠೆಗಳನ್ನನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ? ನಂಬಿದ್ದರಿಂದಲೇ.


ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?


ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.


ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಆಕೆಯು ತಿರಿಗಿ ಅವನಿಗೆ - ನಿನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳಬಹುದು? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರುಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾಶಕ್ತಿ ಯಾವದರಿಂದ ಬಂದಿತೆಂಬದನ್ನು ನನಗೆ ತಿಳಿಸಲಿಲ್ಲ ಅಂದಳು.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು.


ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘಶಾಂತಿ ಪ್ರೀತಿ ಸೈರಣೆ ಇವುಗಳನ್ನೂ


ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ. ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿವಿುತ್ತವೇ ಮನ್ನಿಸಿದೆನು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು