Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:7 - ಕನ್ನಡ ಸತ್ಯವೇದವು J.V. (BSI)

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಯೆನ್ಯಾಚ್ಯಾ ವೈನಾ ಎವ್ಡೆಚ್ ನ್ಹಯ್, ತುಮಿ ತೆಕಾ ದಿಲ್ಲ್ಯಾ ಉತ್ತೆಜನಾಚಿ ಖಬರ್ ಆಯ್ಕುನ್, ಮಾಜ್ಯಾ ಭುತ್ತುರ್ ಜಿವ್ ಭರ್‍ಲೊ ತುಮಿ ಮಾಕಾ ಕವ್ಡೆ ರಾಕುಲ್ಯಾಶಿ, ಅನಿ ಕವ್ಡೆ ಬೆಜಾರಾನ್ ಹಾಸಿ, ಅನಿ ಉಸ್ಕೊ ಕರುನ್ ಹಾಸಿ ಹೆ ಸಗ್ಳೆ ಮಾಕಾ ತೆನಿ ಸಾಂಗಲ್ಲ್ಯಾ ತನ್ನಾ, ಮಾಕಾ ಅನಿಉಲ್ಲೊ ಸಂತೊಸ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:7
34 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.


ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.


ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.


ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಸರ್ವವಿಷಯದಲ್ಲಿಯೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮ ಗುಣವನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಮೊದಲು ಬರೆದೆನು.


ನಾವು ನಿಮಗೆ ಉಲ್ಲಾಸಕಾರಣವಾಗಿದ್ದೇವೆಂಬದನ್ನು ನೀವು ಸ್ವಲ್ಪ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಡೇ ತನಕ ಒಪ್ಪಿಕೊಳ್ಳುವಿರೆಂದು ನಿರೀಕ್ಷಿಸುತ್ತೇನೆ. ಹಾಗೆಯೇ ನೀವೂ ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯಲ್ಲಿ ನಮಗೆ ಉಲ್ಲಾಸಕಾರಣವಾಗುವಿರಿ ಎಂದು ನಿರೀಕ್ಷಿಸುತ್ತೇನೆ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ನಾನು ಅಪರಾಧಿಯೇ ಹೌದೆಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು