Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:12 - ಕನ್ನಡ ಸತ್ಯವೇದವು J.V. (BSI)

12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಆಕ್ರಿಕ್ ಪತರ್ ಕಸ್ಟ್ ಸೊಸುನ್ ಘೆತಲೆ ಹೊಲ್ಯಾರ್ ಅಮಿ ತೆಚ್ಯಾ ವಾಂಗ್ಡಾ ರಾಜ್ವಟ್ ಚಾಲ್ವುತಾಂವ್, ಅಮಿ ತೆಕಾ ತಿರಸ್ಕಾರ್ ಕರ್ಲ್ಯಾರ್, ತೊಬಿ ಅಮ್ಕಾ ತಿರಸ್ಕಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:12
29 ತಿಳಿವುಗಳ ಹೋಲಿಕೆ  

ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ನಿನ್ನ ಕೃತ್ಯಗಳನ್ನು ಬಲ್ಲೆನು; ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನಗೆ ಸೇರಿದವನಲ್ಲವೆಂದು ಹೇಳದೆ ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ, ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ; ಯಾರೂ ಅದನ್ನು ಮುಚ್ಚಲಾರರು.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇವಿುಸಿದ ಪ್ರಕಾರ ನಾನು ನಿಮಗೂ ನೇವಿುಸುತ್ತೇನೆ;


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.


ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು