Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:16 - ಕನ್ನಡ ಸತ್ಯವೇದವು J.V. (BSI)

16 ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೆ ದೂರವಾಗಿರು; ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಬುರ್ಶ್ಯಾ ಪಿಶೆಪಾನಾಚ್ಯಾ ಗೊಸ್ಟಿಯಾನಿಕ್ನಾ ಧುರ್ ರ್‍ಹಾ. ತಸ್ಲ್ಯಾ ಬೊಲ್ನ್ಯಾತ್ನಿ, ಅನಿ ವಿಶಯಾತ್ನಿ ಮಿಳಲ್ಲ್ಯಾಂಚ್ಯಾ ಭುತ್ತುರ್ ದೆವಾಚೆ ಭಿಂಯೆ ಪುರಾ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:16
19 ತಿಳಿವುಗಳ ಹೋಲಿಕೆ  

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ - ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲ್ಯರ ಅಪರಾಧವನ್ನು ಹೆಚ್ಚಿಸಿದ್ದೀರಿ.


ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು; ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು;


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು