Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:7 - ಕನ್ನಡ ಸತ್ಯವೇದವು J.V. (BSI)

7 ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಸಾಂಗ್ತಾ ತ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಅರ್ಥ್ ಕರುನ್ ಘೆ, ಹೆ ಕಳ್ವುನ್ ಘೆವ್ಕ್ ಅಮ್ಚೊ ಧನಿಚ್ ತುಕಾ ಆದಾರ್ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:7
40 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಆತನನ್ನು ಆಲೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಈ ಮನುಷ್ಯನು ಎಷ್ಟು ದೊಡ್ಡವನೆಂದು ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಸುಲುಕೊಂಡು ಬಂದ ಶ್ರೇಷ್ಠವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.


ನಾನು ನಿನ್ನ ಸೇವಕನು; ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.


ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ ಇಸ್ರಾಯೇಲ್ಯರನ್ನು ಆಳುವದಕ್ಕೆ ನಿನ್ನನ್ನು ನೇವಿುಸಲಿ.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧವಾದದ್ದು, ಪ್ರಾಕೃತ ಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.


ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.


ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.


ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು