Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:11 - ಕನ್ನಡ ಸತ್ಯವೇದವು J.V. (BSI)

11 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜೆ ವರ್‍ತಿ ಯೆಲ್ಲಿ ಸಂಕಟಾ, ಅನಿ ಕಸ್ಟಾ ತುಕಾ ಗೊತ್ತ್ ಹಾತ್. ಅಂತಿಯೊಕಾತ್, ಇಕೊನಿಯಾತ್, ಅನಿ ಲಿಸ್ತ್ರಾತ್ ಮಾಕಾ ಕಸ್ಲೊ ಕಸ್ಟ್ ಸೊಸ್ತಲೊ ಪಡ್ಲೊ ಕಾಯ್-ಕಾಯ್ ಹೊಲೆ ಮನ್ತಲೆ ಸಗ್ಳೆ ತುಕಾ ಗೊತ್ತ್ ಹಾಯ್. ಖರೆ ಧನಿಯಾನ್ ತ್ಯಾ ಸಗ್ಳ್ಯಾ ತರಾಸಾನಿತ್ನಾ ಮಾಕಾ ರಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:11
43 ತಿಳಿವುಗಳ ಹೋಲಿಕೆ  

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ;


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ನಾನು ನಿನ್ನನ್ನು ಇಸ್ರಾಯೇಲ್ ಜನರ ಕೈಯೊಳಗಿಂದಲೂ ಅನ್ಯಜನರ ಕೈಯೊಳಗಿಂದಲೂ ಬಿಡಿಸುವೆನು.


ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.


ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.


ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರ ಆದರಣೆಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು