Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:10 - ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆಮಸ್ ಹ್ಯಾ ಜಗಾಚ್ಯಾ ಪ್ರೆಮಾತ್ ಪಡುನ್ ಗೆಲಾ ಅನಿ ಮಾಕಾ ಸೊಡುನ್ ತೊ ಥೆಸಲೊನಿಕಾ ಮನ್ತಲ್ಯಾ ಗಾವಾಕ್ ಗೆಲಾ. ಕ್ರೆಸೆನ್ಸ್ ಗಾಲಾತಾಕ್ ಗೆಲಾ, ಅನಿ ತಿತ್ ದಲ್ಮಾತ್ಸಿಯಾಕ್ ಗೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:10
32 ತಿಳಿವುಗಳ ಹೋಲಿಕೆ  

ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ಮಾರ್ಕ ಅರಿಸ್ತಾರ್ಕ ದೇಮ ಲೂಕರೂ ನಿನ್ನನ್ನು ವಂದಿಸುತ್ತಾರೆ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ -


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.


ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು