Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:16 - ಕನ್ನಡ ಸತ್ಯವೇದವು J.V. (BSI)

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾಕಾ ಪಯ್ಲೆಪಟಿ ಇಚಾರ್ನಿ ಕರುಕ್ ಇಬೆ ಕರಲ್ಲ್ಯಾ ತನ್ನಾ ಕೊನ್‍ಬಿ ಮಾಜ್ಯಾ ಪಕ್ಷಾತ್ ಇಬೆ ರ್‍ಹಾವ್ಕ್ ನಾ. ಸಗ್ಳ್ಯಾಬಿನಿ ಮಾಕಾ ಸೊಡುನ್ ಸೊಡ್ಲ್ಯಾನಿ. ಹೆಚೆಸಾಟ್ನಿ ದೆವ್ ತೆಂಕಾ ಚುಕಿದಾರ್ ಕರುನಸುಂದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:16
16 ತಿಳಿವುಗಳ ಹೋಲಿಕೆ  

ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.


ನನ್ನನ್ನು ವಿಚಾರಿಸುವವರಿಗೆ ಇದೇ ನನ್ನ ಉತ್ತರ.


ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು.


ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು