Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:2 - ಕನ್ನಡ ಸತ್ಯವೇದವು J.V. (BSI)

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚಿ ಬರಿ ಖಬರ್ ಸಾಂಗುನ್ಗೆತ್ ರ್‍ಹಾ, ಅನ್ಕುಲ್ ರ್‍ಹಾಲ್ಯಾರ್‍ಬಿ ನಸ್ಲ್ಯಾರ್‍ಬಿ ಸಗ್ಳ್ಯಾ ಎಳಾರ್ ತ್ಯಾತುರ್ ತಿಯಾ ಮಗ್ನ್ ಹೊವ್ನ್ ರ್‍ಹಾ, ಸಗ್ಳೆ ಸಂಬಾಳುನ್ ಘೆವ್ನ್ ತೆಂಕಾ ಜೊರ್ ಕರುನ್, ಚುಕ್ ಹೊತ್ತೆ ಸಮಾ ಕರುನ್, ಧೈರೊ ದಿವ್ನ್ ಉಲ್ಲಿ ಉಮ್ಮೆದ್ ಭರುನ್ ಸಗ್ಳೆ ಸಂಬಾಳುನ್ ಘೆವ್ನ್ ಶಿಕ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:2
36 ತಿಳಿವುಗಳ ಹೋಲಿಕೆ  

ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಆದಕಾರಣ ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘಶಾಂತಿ ಪ್ರೀತಿ ಸೈರಣೆ ಇವುಗಳನ್ನೂ


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು.


ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.


ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವದೆಂದು ನೆನಸಿ ಸಬ್ಬತ್‍ದಿನದಲ್ಲಿ ಊರಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕೂತುಕೊಂಡು ಮಾತಾಡಿದೆವು.


ಆದರೆ ಆತನು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.


ಅವರು ಯೇಸುವಿನ ಬಳಿಗೆ ಬಂದು - ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು;


ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು