Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:5 - ಕನ್ನಡ ಸತ್ಯವೇದವು J.V. (BSI)

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತಿಯಾ ಸಗ್ಳ್ಯಾ ವಿಶಯಾತ್ನಿಬಿ ಸಂಬಾಳುನ್ ಘೆವ್ನ್ ರ್‍ಹಾಮ್; ತರಾಸ್ ಸೊಸುನ್ ಘೆವ್ನ್ ಚಲ್, ಎಕ್ ಬರಿ ಖಬರ್ ಸಾಂಗ್ತಲೊ ಮಾನುಸ್ ಹೊವ್ನ್ ರ್‍ಹಾ ಅನಿ ತುಕಾ ದಿಲ್ಲೆ ಕಾಮ್ ದೆವಾಚ್ಯಾ ಸೆವಕಾಚ್ಯಾ ಸರ್ಕೆ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:5
28 ತಿಳಿವುಗಳ ಹೋಲಿಕೆ  

ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಕ್ರಿಸ್ತ ಯೇಸುವಿನ ಒಳ್ಳೇ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನನುಭವಿಸು.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.


ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು.


ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


ಎಚ್ಚರವಾಗಿರು; ಸಾಯುವ ಹಾಗಿದ್ದ ಉಳಿದವುಗಳನ್ನು ದೃಢಪಡಿಸು. ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಸಂಪೂರ್ಣವಾದದ್ದೆಂದು ನಾನು ಕಾಣಲಿಲ್ಲ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾನು ನಿಮಗೆ ಹೇಳಿದ್ದನ್ನು ಎಲ್ಲರಿಗೂ ಹೇಳುತ್ತೇನೆ, ಎಚ್ಚರವಾಗಿರಿ ಅಂದನು.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ ಅವರಿಗೆ ಹೀಗೆ ನುಡಿ - ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ ಆ ದೇಶದವರು ತಮ್ಮಲ್ಲಿ ಆರಿಸಿ ನೇವಿುಸಿಕೊಂಡ ಕಾವಲುಗಾರನು


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು