Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:5 - ಕನ್ನಡ ಸತ್ಯವೇದವು J.V. (BSI)

5 ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆ ಸಗ್ಳೆ ಬಗಟ್ಲ್ಯಾರ್, ದೆವಾಚೊ ಝಡ್ತಿಚೊ ದಿಸ್ ಯೆವ್ನ್ ಹೊಲಾ, ಅನಿ ತುಮಿ ಸಗ್ಳೆ ಜೆ ಖಲ್ಯಾ ರಾಜಾಸಾಟ್ನಿ ಕಸ್ಟ್ ಸೊಸುಲ್ಯಾಸಿ, ತ್ಯಾ ರಾಜಾತ್ ಜಾವ್ಕ್ ಯೊಗ್ಯ್ ಮನಿ ಸರ್ಕೆ ನಿರ್ನಯ್ ಹೊಲಾ ಮನ್ತಲೆ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:5
28 ತಿಳಿವುಗಳ ಹೋಲಿಕೆ  

ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಆತನ ಕೈಕೆಲಸಗಳು ನೀತಿಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ.


ಆತನು ನೀತಿನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು