Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:12 - ಕನ್ನಡ ಸತ್ಯವೇದವು J.V. (BSI)

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:12
21 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.


ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ,


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ಅವರು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆ ಎಂದು ನೋಡುತ್ತಿದ್ದನು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ಅನ್ಯಾಯವನ್ನು ನೋಡಿ ಸಂತೋಷಪಡದೆ ಸತ್ಯಕ್ಕೆ ಜಯವಾಗುವಲ್ಲಿ ಸಂತೋಷಪಡುತ್ತದೆ;


ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು