Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:1 - ಕನ್ನಡ ಸತ್ಯವೇದವು J.V. (BSI)

1 ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್ ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾಸಾಟ್ನಿ ಮಾಗ್ನಿ ಕರಾ. ತುಮ್ಚ್ಯಾ ಮದ್ದಿ ಕಶೆ ಧನಿಯಾಚಿ ಖಬರ್ ಪಾವ್ಲಿ, ಅನಿ ತಿಕಾ ತುಮಿ ಕಶೆ ಮಾನ್ ದಿಲ್ಯಾಸಿ ತಸೆಚ್ ತಿ ಲಗ್ಗು-ಲಗ್ಗುನಾ ಸಗ್ಳ್ಯಾಕ್ಡೆ ಜಾವ್ನ್ ಪಾವುಂದಿ, ಅನಿ ತಿಕಾ ಮಾನ್ ದಿವ್ನ್ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:1
22 ತಿಳಿವುಗಳ ಹೋಲಿಕೆ  

ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಸಹೋದರರೇ, ನಾವು ಸುಮ್ಮಸುಮ್ಮಗೆ ನಿಮ್ಮಲ್ಲಿಗೆ ಬರಲಿಲ್ಲವೆಂಬದನ್ನೂ ನಿಮಗೆ ತಿಳಿದಿರುವ ಪ್ರಕಾರ


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು