Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:11 - ಕನ್ನಡ ಸತ್ಯವೇದವು J.V. (BSI)

11 ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:11
15 ತಿಳಿವುಗಳ ಹೋಲಿಕೆ  

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಆತನು ಅವನಿಗೆ - ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವದಕ್ಕೆ ಮನಸ್ಸುಮಾಡಿದ್ದು ಒಳ್ಳೇದೇ ಸರಿ.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು