Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:15 - ಕನ್ನಡ ಸತ್ಯವೇದವು J.V. (BSI)

15 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:15
10 ತಿಳಿವುಗಳ ಹೋಲಿಕೆ  

ಅರಸನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.


ದೇವದಾರುಗಳನ್ನು ಹಾಕುವೆವು ಎಂದು ಗರ್ವದಿಂದಲೂ ಉಬ್ಬಟೆಯಿಂದಲೂ ಹೇಳಿಕೊಳ್ಳುವ ಎಫ್ರಾಯೀಮ್ಯರು ಸಮಾರ್ಯದ ನಿವಾಸಿಗಳು ಇವರೆಲ್ಲರಿಗೂ ಆ ಮಾತು ಗೊತ್ತಾಗುವದು.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ಆದಕಾರಣ ಆತನನ್ನು ನೋಡುವದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಎಣ್ಣೇಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನ್, ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು