Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:4 - ಕನ್ನಡ ಸತ್ಯವೇದವು J.V. (BSI)

4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:4
12 ತಿಳಿವುಗಳ ಹೋಲಿಕೆ  

ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.


ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.


ಅನಂತರ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇವಿುಗೆ ಕರಿಸಿಕೊಂಡನು.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ; ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ ಎಂದು ಪ್ರಾರ್ಥನೆ ಮಾಡಿದನು.


ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು