Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:15 - ಕನ್ನಡ ಸತ್ಯವೇದವು J.V. (BSI)

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:15
20 ತಿಳಿವುಗಳ ಹೋಲಿಕೆ  

ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಯೆಹೋವನು ಅದರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಿಸಿದ್ದಾನೆ; ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.


ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.


ಅದನ್ನು ನೋಡಿ ಅವರು - ನಾವು ಇದನ್ನು ಹರಿಯಬಾರದು; ಚೀಟುಹಾಕಿ ಇದು ಯಾರಿಗೆ ಬರುವದೋ ನೋಡೋಣ ಎಂದು ಮಾತಾಡಿಕೊಂಡರು. ಇದರಿಂದ - ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು, ನನ್ನ ಅಂಗಿಗೋಸ್ಕರ ಚೀಟು ಹಾಕಿದರು ಎಂಬ ಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರು ಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.


ಯೆಹೋವನು ಇಂತೆನ್ನುತ್ತಾನೆ, ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು. ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು