Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:13 - ಕನ್ನಡ ಸತ್ಯವೇದವು J.V. (BSI)

13 ಯೆಹೂದ ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದದ್ದಲ್ಲದೆ ಬೇರೆ ಎಲ್ಲಾ ಇಸ್ರಾಯೇಲ್ ಪ್ರಾಂತಗಳಲ್ಲಿದ್ದ ಯಾಜಕರೂ ಲೇವಿಯರೂ ಅವನೊಡನೆ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ, ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದುದಲ್ಲದೆ ಬೇರೆ ಎಲ್ಲ ಇಸ್ರಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರು ಹಾಗೂ ಲೇವಿಯರು ಅವನೊಡನೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:13
11 ತಿಳಿವುಗಳ ಹೋಲಿಕೆ  

ಈ ಪ್ರಕಾರ ಇವುಗಳನ್ನು ಅತ್ಯಧಿಕವಾಗಿ ಭದ್ರಪಡಿಸಿದನು.


ಲೇವಿಯರು ಯೆಹೋವನಿಗೆ ಯಾಜಕಸೇವೆಮಾಡದಂತೆ ಯಾರೊಬ್ಬಾಮನೂ ಅವನ ಮಕ್ಕಳೂ ಅವರನ್ನು ತಳ್ಳಿಬಿಟ್ಟು


ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಾಯೇಲ್ಯರ ಗೋತ್ರಪ್ರಧಾನರನ್ನೂ ಕೂಡಿಸಲು ಅವರು ಯೆರೂಸಲೇವಿುಗೆ ಬಂದರು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.


ನಿಮ್ಮ ದೇಶವು ಅಶುದ್ಧವಾಗಿದೆಯೆಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ನಮ್ಮ ದೇವರಾದ ಯೆಹೋವನ ವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.


ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.


ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.


ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.


ನೀವು ಯೆಹೋವನ ಭಾರ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ - ನಾನು ನಿಮಗೆ - ಯೆಹೋವನ ಭಾರ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಭಾರ ಎಂದು ಅಂದಕಾರಣ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು