Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:6 - ಕನ್ನಡ ಸತ್ಯವೇದವು J.V. (BSI)

6 ಆಗ ಅರಸನೂ ಇಸ್ರಾಯೇಲ್ ಪ್ರಧಾನರೂ ಯೆಹೋವನು ನ್ಯಾಯವಂತನೆಂದು ಒಪ್ಪಿ ತಮ್ಮನ್ನು ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಬಾಮನೂ ತಾವು ಮಾಡಿದ ತಪ್ಪಿಗೆ ಪಶ್ಚಾತ್ತಾಪಪಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:6
25 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ;


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.


ಆದರೆ ನೀತಿಸ್ವರೂಪನಾದ ಯೆಹೋವನು ದುಷ್ಟರು ಹಾಕಿದ ಬಂಧನಗಳನ್ನು ಛೇಧಿಸಿಬಿಟ್ಟನು.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಹಿಜ್ಕೀಯನು ತನ್ನ ಗರ್ವವನ್ನು ಬಿಟ್ಟು ಯೆರೂಸಲೇವಿುನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಜೀವಮಾನದಲ್ಲಿ ಯೆಹೋವನ ಕೋಪವು ಅವರ ಮೇಲೆ ಬರಲಿಲ್ಲ.


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.


ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು