Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:10 - ಕನ್ನಡ ಸತ್ಯವೇದವು J.V. (BSI)

10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡಿಸುವ ಆರೋನನ ಸಂತಾನದವರಾದ ಯಾಜಕರೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:10
11 ತಿಳಿವುಗಳ ಹೋಲಿಕೆ  

ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನೂ ನಮ್ಮ ಪಿತೃಗಳನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನೇ ಅಲ್ಲವೇ.


ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು