Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:15 - ಕನ್ನಡ ಸತ್ಯವೇದವು J.V. (BSI)

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಅಬೀಯನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:15
16 ತಿಳಿವುಗಳ ಹೋಲಿಕೆ  

ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು.


ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ - ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳುಂಟಷ್ಟೆ;


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು