Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:5
24 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆ.


ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು.


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು;


ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಲು ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ ಯೆಹೋವನಿಗಾಗಿ ಸರ್ವಾಂಗಹೋಮ ಮಾಡಬೇಕು.


ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ


ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.


ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನಮಾಡಿದಿಯಲ್ಲಾ, ಅದನ್ನು ನೆರವೇರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು